ಬೆಂಗಳೂರು: ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಗುಣಮುಖರಾಗಿದ್ದಾರೆ.
‘ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ್ದೇನೆ. ಮುಂದಿನ ಎರಡು ವಾರ ಮನೆಯಿಂದ ಹೊರ ಹೋಗಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ’ ಎಂದು ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
‘ಹೋಂ ಐಸೋಲೇಷನ್ನಲ್ಲಿದ್ದ ನನಗೆ ಉಸಿರಾಟದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಸಿಟಿ–ಸ್ಕ್ಯಾನ್ ಮಾಡಿದಾಗ, ಶ್ವಾಸಕೋಶದಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ಹರಡಿದ್ದು ಪತ್ತೆಯಾಗಿತ್ತು. ಚಿಕಿತ್ಸೆ ನೀಡಿ ಶುಶ್ರೂಷೆ ಮಾಡಿದ ಎಲ್ಲ ವೈದ್ಯರು ಮತ್ತು ಶುಶ್ರೂಷಕರಿಗೆ ಕೃತಜ್ಞತೆಗಳು’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.