ADVERTISEMENT

ಬಂಡವಾಳಶಾಹಿ ಹಿಡಿತದಲ್ಲಿ ದೇಶ: ಸುರ್ಜೇವಾಲ ಟೀಕೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್‍ ಸುರ್ಜೆವಾಲಾ ಆರೋಪ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 20:38 IST
Last Updated 27 ಸೆಪ್ಟೆಂಬರ್ 2020, 20:38 IST
ರಣದೀಪ್ ಸಿಂಗ್  ಸುರ್ಜೆವಾಲಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಡಿ.ಕೆ.ಶಿವಕುಮಾರ್ 
ರಣದೀಪ್ ಸಿಂಗ್  ಸುರ್ಜೆವಾಲಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಡಿ.ಕೆ.ಶಿವಕುಮಾರ್    

ದೇವನಹಳ್ಳಿ: 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಬಂಡವಾಳಶಾಹಿಗಳ ಕಪಿಮುಷ್ಟಿಯಲ್ಲಿದೆ. ಕೇಂದ್ರ ಬಿಜೆಪಿ ಸರ್ಕಾರ ಈ ದೇಶವನ್ನೂ ಬಂಡವಾಳಶಾಹಿಗಳಿಗೆ ಒಪ್ಪಿಸಲು ನಿರ್ಧಾರ ಮಾಡಿದಂತಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‍ಸಿಂಗ್‍ ಸುರ್ಜೆವಾಲಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲು 5 ವರ್ಷಗಳ ಆಡಳಿತ ಅವಧಿಯಲ್ಲಿ ನೀಡಿದ ಭರವಸೆಗಳು ಹುಸಿಯಾಗಿವೆ ಎಂದರು.

ಚೇತರಿಕೆ ಕಾಣದ ಆರ್ಥಿಕ ವ್ಯವಸ್ಥೆ

ADVERTISEMENT

ಅನಗತ್ಯ ನೋಟು ರದ್ದು ನಿರ್ಧಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಇನ್ನೂ ಚೇತರಿಕೆ ಕಂಡಿಲ್ಲ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಜಿಎಸ್‍ಟಿ ಪಾಲು ನೀಡದೆ ಸತಾಯಿಸುತ್ತಿದೆ. ದೇಶದಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಕೇಂದ್ರ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷದ ರಾಜ್ಯದ ಉಸ್ತುವಾರಿಯಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿದ ಅವರನ್ನುಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಕಾರ್ಯಕರ್ತರು ಬರಮಾಡಿಕೊಂಡರು.ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವಿವಿಧ ಘಟಕದ ಕಾಂಗ್ರೆಸ್‍ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.