ADVERTISEMENT

ಅಮಾನತು ಆದೇಶ: ಎಸ್.ಮೂರ್ತಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 12:40 IST
Last Updated 4 ಫೆಬ್ರುವರಿ 2019, 12:40 IST
   

ಬೆಂಗಳೂರು:ಅಮಾನತು ಆದೇಶ ಪ್ರಶ್ನಿಸಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಆರ್. ದೇವದಾಸ್ ಹಿಂದೆ ಸರಿದಿದ್ದಾರೆ.

‘ಅರ್ಜಿದಾರರು ನನಗೆ ಪರಿಚಯವಿದ್ದಾರೆ ಎಂಬ ಕಾರಣಕ್ಕೆ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ’ ಅವರು ತಿಳಿಸಿದ್ದಾರೆ.

ಪ್ರಕರಣವೇನು?

ADVERTISEMENT

ಬೆಳಗಾವಿಯಲ್ಲಿ 2016 ಹಾಗೂ 17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಸ್‌.ಮೂರ್ತಿ ಅವರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.