ADVERTISEMENT

ಇಬ್ಬರು ಯುವಕರ ಅನುಮಾನಾಸ್ಪದ ಸಾವು

ಅತಿಯಾಗಿ ಮಾದಕ ವಸ್ತು ಸೇವನೆ ಕಾರಣ?

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 5:15 IST
Last Updated 20 ನವೆಂಬರ್ 2019, 5:15 IST
   

ಬೆಂಗಳೂರು: ಯುವಕರಿಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕೋದಂಡರಾಮಪುರದ ನಿವಾಸಿಗಳಾದ ಅಭಿಲಾಷ್‌ (23) ಮತ್ತು ಗೋಪಿ (32) ಮೃತಪಟ್ಟವರು.

‘ಮೃತರಿಬ್ಬರೂ ಸ್ನೇಹಿತ ರಾಗಿದ್ದು, ಒಬ್ಬ ಜ್ವರ ಮತ್ತು ವಾಂತಿಭೇದಿಯಿಂದ ಮೃತಪಟ್ಟಿದ್ದಾನೆ. ಮತ್ತೊಬ್ಬ ಹೊಟ್ಟೆನೋವಿಗೆ ಮಾತ್ರೆ ಯೊಂದನ್ನು ಸೇವಿಸಿದ್ದು, ಅದರ ಪರಿಣಾಮದಿಂದ ಸಾವಿಗೀಡಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು. ವೈಯಾಲಿಕಾವಲ್‌ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ADVERTISEMENT

‘ಅತಿಯಾದ ಪ್ರಮಾಣದಲ್ಲಿ ಮಾದಕ ವಸ್ತು ಸೇವಿಸಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕಲು ಯತ್ನ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಪ್ರತಿನಿಧಿ ಸುವ ಕ್ಷೇತ್ರದಲ್ಲೇ ಮಾದಕ ವಸ್ತು ಮಾರಾಟ ಅವ್ಯಾಹತವಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಸ್ಥಳೀಯರ ಆರೋಪವನ್ನು ಪೊಲೀಸರು ‌ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.