ಬೆಂಗಳೂರು:ಕರ್ನಾಟಕ ರಾಜ್ಯ ಸ್ವಕುಳಸಾಳಿ ಸಮಾಜದ ಗುರುಪೀಠದ ಸಮಾಲೋಚನಾ ಸಭೆ ಹುಬ್ಬಳ್ಳಿಯ ಈಶ್ವರ ದೇವಸ್ಥಾನದ ದಿವಟೆ ಗಲ್ಲಿಯಲ್ಲಿ ಇದೇ 28ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಗುರುಪೀಠದ ಬಗ್ಗೆ, ಗುರುಗಳ ಪಟ್ಟಾಭಿಷೇಕದ ಸ್ವರೂಪ, ಗುರುಪೀಠದ ಬೈಲಾ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷಚಂದ್ರಕಾಂತ ಭಂಡಾರೆ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.