ಬೆಂಗಳೂರು: ವೀರಶೈವ–ಲಿಂಗಾಯತ ಮಠಾಧೀಶರ ನಿಯೋಗವೊಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿಯಾಗಿ, ಮುಖ್ಯಮಂತ್ರಿಯಾಗಿ ಮುಂದುವರಿಯಲು ಮನವಿ ಮಾಡಿತು.
ಅಗತ್ಯವಿದ್ದರೆ ನಿಮ್ಮ ಪರವಾಗಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಅವರಿಗೂ ಮನವಿ ಸಲ್ಲಿಸಲು ಸಿದ್ಧರಿರುವುದಾಗಿ ಹೇಳಿದರು. ನಿಯೋಗದಲ್ಲಿ 20ಕ್ಕೂ ಹೆಚ್ಚು ಮಠಾಧೀಶರಿದ್ದರು. ಸುಮಾರು ಅರ್ಧ ಗಂಟೆ ಅವರು ಯಡಿಯೂರಪ್ಪ ಜತೆ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.