ADVERTISEMENT

ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ: ಸ್ವರೂಪ್ ಕುಮಾರ್‌

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 1:40 IST
Last Updated 10 ಅಕ್ಟೋಬರ್ 2021, 1:40 IST
ಕಾರ್ಯಕ್ರಮದಲ್ಲಿ ಎನ್.ಸ್ವರೂಪ್ ಕುಮಾರ್‌ ಅವರನ್ನು ಶಿಕ್ಷಕರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ‌ದರು. ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ಬೆಂಗಳೂರು ದಕ್ಷಿಣ ವಲಯ–3ರ ಅಧ್ಯಕ್ಷ ರುದ್ರೇಶ್, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಉಪಾಧ್ಯಕ್ಷ ವೆಂಕಟೇಶ್ ಕುಲಕರ್ಣಿ, ಶಕುಂತಲಮ್ಮ ಹಾಗೂ ಇತರರು ಇದ್ದರು.
ಕಾರ್ಯಕ್ರಮದಲ್ಲಿ ಎನ್.ಸ್ವರೂಪ್ ಕುಮಾರ್‌ ಅವರನ್ನು ಶಿಕ್ಷಕರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ‌ದರು. ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ಬೆಂಗಳೂರು ದಕ್ಷಿಣ ವಲಯ–3ರ ಅಧ್ಯಕ್ಷ ರುದ್ರೇಶ್, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಉಪಾಧ್ಯಕ್ಷ ವೆಂಕಟೇಶ್ ಕುಲಕರ್ಣಿ, ಶಕುಂತಲಮ್ಮ ಹಾಗೂ ಇತರರು ಇದ್ದರು.   

ಬೆಂಗಳೂರು: ‘ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ ಮತ್ತು‌ ಸಾಮಾಜಿಕ ನ್ಯಾಯ ಸ್ಥಾಪನೆ ಸಾಧ್ಯ’ ಎಂದು ಸಮಾಜ ಸೇವಕ ಎನ್.ಸ್ವರೂಪ್ ಕುಮಾರ್‌ ತಿಳಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ವಲಯದ ವತಿಯಿಂದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಧುನಿಕತೆಯ ಅಬ್ಬರದದಲ್ಲಿ ಪರಂಪರೆ ಮತ್ತು ಮೌಲ್ಯಗಳು ಕುಸಿಯುತ್ತಿವೆ. ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಇಲ್ಲ. ಎಲ್ಲವೂ ಇಂಟರ್‌ನೆಟ್‌ನಲ್ಲಿ ಸಿಗುತ್ತದೆ ಎನ್ನುವಸಮೂಹ ಸನ್ನಿಗೆ ಒಳಗಾಗಿದ್ದೇವೆ. ಇದರ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.

ADVERTISEMENT

ಸಂಘದ ನಿಕಟಪೂರ್ವ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಶಿಕ್ಷಕರು ಜ್ಞಾನದ ಬೆಳಕು ಎಂದು ಶಿಕ್ಷಕರ ದಿನದಂದು ಭಾಷಣ ಬಿಗಿಯುತ್ತಾರೆ. ಆದರೆ, ಹೋರಾಟ ನಡೆಸಿಯೇ ಶಿಕ್ಷಕರುವೇತನ, ಸೌಲಭ್ಯ ಪಡೆಯುವ ಅನಿವಾರ್ಯ ಸ್ಥಿತಿ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.