ಬೆಂಗಳೂರು: ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಸ್ವಿಗ್ಗಿ ನೌಕರ ಮೃತಪಟ್ಟರೆ, ಇತರ ನಾಲ್ವರು ಗಾಯಗೊಂಡ ಘಟನೆ ಚೊಕ್ಕನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಮಾರುತಿನಗರದ ಮಂಜುನಾಥ (40) ಮೃತಪಟ್ಟವರು. ಮತ್ತೊಂದು ಬೈಕ್ನಲ್ಲಿದ್ದ ಮೊಹಮ್ಮದ್ ಹನೀಫ್, ಪತ್ನಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮೊಹಮ್ಮದ್ ಹನೀಫ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಪತ್ನಿ ಮತ್ತು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಸ್ವಿಗ್ಗಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ರಾತ್ರಿ 12.30ರ ಸುಮಾರಿಗೆ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು. ಅದೇ ವೇಳೆಯಲ್ಲಿ ಮೊಹಮ್ಮದ್ ಹನೀಫ್ ಅವರು ಚಲಾಯಿಸುತ್ತಿದ್ದ ಬೈಕ್, ಚೊಕ್ಕನಹಳ್ಳಿ ಕ್ರಾಸ್ ಬಳಿ ಮಂಜುನಾಥ್ ಬೈಕ್ಗೆ ಡಿಕ್ಕಿಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಂಜುನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ಬಾಳದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನ ಆಗಲಿಲ್ಲ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.