ADVERTISEMENT

ಅಂತರಜಿಲ್ಲಾ ಸಾರಿಗೆ ಪಾಸ್‌: ತಹಶೀಲ್ದಾರ್‌ ವಿತರಿಸುವಂತಿಲ್ಲ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 8:50 IST
Last Updated 6 ಏಪ್ರಿಲ್ 2020, 8:50 IST

ಬೆಂಗಳೂರು: ಅಂತರ ಜಿಲ್ಲಾ ಸಾರಿಗೆ ಪಾಸ್‌ಗಳನ್ನು ತಹಶೀಲ್ದಾರ್‌ಗಳು ವಿತರಿಸುವಂತಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಹಂತದಲ್ಲಿ ಮಾತ್ರ ಈ ಪಾಸ್‌ಗಳನ್ನು ನೀಡಬಹುದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಸೋಮವಾರ ಆದೇಶ ಮಾಡಿದ್ದಾರೆ.

ಕೆಲವು ಕಡೆ ತಹಶೀಲ್ದಾರ್‌ಗಳು ಅಂತರಜಿಲ್ಲಾ ಸಾರಿಗೆ ಪಾಸ್‌ ವಿತರಿಸುವುದು ಗಮನಕ್ಕೆ ಬಂದಿದೆ. ಈ ವ್ಯವಸ್ಥೆಯನ್ನು ನಿಲ್ಲಿಸಿ, ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮಾತ್ರ ಈ ಪಾಸ್‌ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT