ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂಬ ಕಾರಣಕ್ಕೆ ಮಹಿಳೆಯೊಬ್ಬರಿಗೆ ಕಿರುಕುಳ ಕೊಟ್ಟು ತಲಾಖ್ ನೀಡಲಾಗಿದ್ದು, ಈ ಸಂಬಂಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಚಾಮರಾಜಪೇಟೆ ನಿವಾಸಿಯಾದ ಮಹಿಳೆ ದೂರು ನೀಡಿದ್ದಾರೆ. ಅವರ ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.
‘2004ರಲ್ಲಿ ಸಯ್ಯದ್ ಅಜ್ಮಲ್ ಎಂಬುವರ ಜೊತೆ ಮದುವೆ ಆಗಿದೆ. ಮೂವರು ಮಕ್ಕಳಿದ್ದಾರೆ. ವರದಕ್ಷಿಣೆ ತರುವಂತೆ ಪತಿ ನಿತ್ಯವೂ ಕಿರುಕುಳ ನೀಡುತ್ತಿದ್ದಾನೆ. ಗರ್ಭಿಣಿಯಾಗಿದ್ದಾಗ ಸರಿಯಾಗಿ ಊಟ ನೀಡದೇ ಪೀಡಿಸಿದ್ದಾನೆ. ಆತನ ಕಿರುಕುಳದಿಂದ ಮಾನಸಿಕವಾಗಿ ನೊಂದು ನಿಮ್ಹಾನ್ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇನೆ. ಇದೀಗ ತಲಾಖ್ ಕೊಟ್ಟಿದ್ದಾನೆ’ ಎಂದು ಮಹಿಳೆ ದೂರಿದ್ದಾರೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.