ADVERTISEMENT

ತೆರಿಗೆ ವಂಚನೆ ಆರೋಪ: ಬೆಂಗಳೂರಿನ ಚಿನ್ನಾಭರಣ ಮಳಿಗೆಗಳಲ್ಲಿ ಐ.ಟಿ ಶೋಧ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 7:04 IST
Last Updated 31 ಜನವರಿ 2023, 7:04 IST
   

ಬೆಂಗಳೂರು: ತೆರಿಗೆ ವಂಚನೆ ಮತ್ತು ವಹಿವಾಟಿನ ನೈಜ ಮಾಹಿತಿ ಮುಚ್ಚಿಟ್ಟಿರುವ ಆರೋಪದ ಮೇಲೆ ನಗರದ ಹಲವೆಡೆ ಚಿನ್ನಾಭರಣ ಮಳಿಗೆಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಹಲವು ಪ್ರಮುಖ ಬ್ರ್ಯಾಂಡ್‌ನ ಚಿನ್ನಾಭರಣ ಮಳಿಗೆಗಳಲ್ಲಿ ಶೋಧ ನಡೆಯುತ್ತಿದೆ. ಚಿಕ್ಕಪೇಟೆ, ಜಯನಗರ, ಬಸವನಗುಡಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ 25ಕ್ಕೂ ಹೆಚ್ಚು ಮಳಿಗೆಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಪೊಲೀಸ್‌ ಭದ್ರತೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎಲ್ಲ ಮಳಿಗೆಗಳ ಪ್ರವೇಶ ದ್ವಾರಗಳನ್ನು ಮುಚ್ಚಿ, ಲೆಕ್ಕಪತ್ರ, ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.