ADVERTISEMENT

ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಥಳಿತ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 18:12 IST
Last Updated 23 ಆಗಸ್ಟ್ 2022, 18:12 IST

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೆಂಕಟಸ್ವಾಮಿ ಎಂಬುವವರಿಗೆ ಪೋಷಕರು ಹಾಗೂ ಸಾರ್ವಜನಿಕರು ಶಾಲೆಯಲ್ಲಿಯೇ ಥಳಿಸಿದ್ದಾರೆ.

ನಗರದ ಬಿಇಒ ಹಾಗೂ ಡಿಡಿಪಿಐ ಕಚೇರಿ ಆವರಣದ ಶಾಲೆಯ ಮುಂದೆ ಈ ವಿಚಾರವಾಗಿ ಶುಕ್ರವಾರ ಹಲವು ವಿದ್ಯಮಾನಗಳು ಜರುಗಿದವು. ಶಾಲೆ ಮುಂದೆ ಪೋಷಕರು ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಡಿಡಿಪಿಐ ಕಚೇರಿ ಆವರಣದಲ್ಲಿ ಸಂಜೆಯವರೆಗೂ ಚರ್ಚೆಗಳು ನಡೆಯುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT