ADVERTISEMENT

ಬೈಕಿಗೆ ಟ್ಯಾಂಕರ್ ಡಿಕ್ಕಿ: ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 18:01 IST
Last Updated 25 ಜೂನ್ 2022, 18:01 IST
ರೇಣುಕಾ ಭಾತಕಾಂಡೆ
ರೇಣುಕಾ ಭಾತಕಾಂಡೆ   

ಬೆಳಗಾವಿ: ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ಶನಿವಾರ ಬೈಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಸಾವನ್ನಪ್ಪಿದ್ದಾರೆ.

ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಲಾ ಭಾತಕಾಂಡೆ (30)‌ ಮೃತಪಟ್ಟವರು. ತಮ್ಮ ಬೈಕಿನಲ್ಲಿ ಚನ್ನಮ್ಮ ವೃತ್ತದ ಕಡೆ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಶನಿವಾರ ರಾತ್ರಿ ಸಾವನ್ನಪ್ಪಿದರು.

ಅವರಿಗೆ ಇಬ್ಬರು ಮಕ್ಕಳಿದ್ದು, ಕಳೆದ ಕೆಲವು ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಈಗ ಶಿಕ್ಷಕಿ ಕೂಡ ಸಾವನ್ನಪ್ಪಿದ್ದರಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ.

ADVERTISEMENT

ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.