ADVERTISEMENT

ಶಿಕ್ಷಕರಿಗೆ ಸ್ಥಳದಲ್ಲೇ ಆದೇಶ ಪತ್ರ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 20:16 IST
Last Updated 1 ಅಕ್ಟೋಬರ್ 2019, 20:16 IST

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆದ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ್ರ ನೀಡಲು ಶಿಕ್ಷಣ ಇಲಾಖೆ ಕೊನೆಗೂ ಮುಂದಾಗಿದೆ.

ಸ್ಥಳ ಆಯ್ಕೆ ಮಾಡಿಕೊಂಡವರಿಗೆ ಡಿಡಿಪಿಐ ಕಚೇರಿಗಳಿಗೆ ವರ್ಗಾವಣೆ ಆದೇಶ ಪತ್ರ ಕಳುಹಿಸಿ ಕೊಡಲಾಗುತಿತ್ತು. ನಂತರ ಶಿಕ್ಷಕರಿಗೆ ವಿತರಣೆ ಮಾಡುವ ವ್ಯವಸ್ಥೆ ಜಾರಿಯಲ್ಲಿತ್ತು. ಈ ವ್ಯವಸ್ಥೆ ಬದಲಿಸಿದ್ದು, ಧಾರವಾಡ ವಿಭಾಗದಲ್ಲಿ ಅಂತರ್ ಘಟಕದ ಕೋರಿಕೆ ವರ್ಗಾವಣೆಯಲ್ಲಿ ಸ್ಥಳ ನಿಯುಕ್ತಿ ಮಾಡಿಕೊಂಡ ಶಿಕ್ಷಕರಿಗೆ ಸ್ಥಳದಲ್ಲೇ ಆದೇಶ ಕೊಡಲಾಗಿದೆ.

ಬೆಂಗಳೂರಿನಲ್ಲಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮುಗಿದಿದ್ದು, ಅಂತರ್‌ ಘಟಕ ವಿಭಾಗದಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಇನ್ನೂ ವರ್ಗಾವಣೆ ಆದೇಶ ನೀಡದ ಬಗ್ಗೆ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.