ADVERTISEMENT

ತೆಪ್ಪ ಮಗುಚಿ ಕೆರೆಗೆ ಉರುಳಿದ ಟೆಕ್ಕಿಗಳು, ಓರ್ವ ಕಣ್ಮರೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 7:54 IST
Last Updated 8 ಫೆಬ್ರುವರಿ 2020, 7:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ತೆಪ್ಪ ಮಗುಚಿ ಸಾಫ್ಟ್‌ವೇರ್ ಎಂಜಿನಿಯರ್ ಕಣ್ಮರೆಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ್ಕೆರೆ ಕೆರೆಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಸಚಿನ್ ಕಣ್ಮರೆಯಾದ ಟೆಕಿ.

ಶುಕ್ರವಾರ ರಾತ್ರಿ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಸಚಿನ್ ಮತ್ತು ಉಲ್ಲಾಸ್ ಎಂಬ ಇಬ್ಬರು ಬಳಿಕ ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ತೆಪ್ಪ ಮಗುಚಿ ಇಬ್ಬರೂ ನೀರಿಗೆ ಬಿದ್ದಿದ್ದಾರೆ.

ADVERTISEMENT

ಉಲ್ಲಾಸ್ ಈಜಿ ದಡ ಸೇರಿದ್ದಾರೆ. ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೆರೆಯಲ್ಲಿಶೋಧಕಾರ್ಯ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.