ADVERTISEMENT

ತೇಜಸ್ವಿನಿ ಬಿಜೆಪಿ ಉಪಾಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 19:47 IST
Last Updated 2 ಏಪ್ರಿಲ್ 2019, 19:47 IST
ತೇಜಸ್ವಿನಿ ಅನಂತಕುಮಾರ್
ತೇಜಸ್ವಿನಿ ಅನಂತಕುಮಾರ್   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ತೇಜಸ್ವಿನಿ ಅನಂತಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ತೇಜಸ್ವಿನಿ ಅವರ ಹೆಸರನ್ನು ರಾಜ್ಯ ಘಟಕದ ಶಿಫಾರಸು ಮಾಡಿತ್ತು. ಆದರೆ, ಯುವ ಮುಂದಾಳು ತೇಜಸ್ವಿ ಸೂರ್ಯ ಅವರಿಗೆ ಪಕ್ಷ ಟಿಕೆಟ್‌ ನೀಡಿತ್ತು. ಕೇಂದ್ರ ನಾಯಕರು ಯಾವುದೇ ಮಾಹಿತಿ ನೀಡದೆ, ಸೌಜನ್ಯಕ್ಕೂ ತಿಳಿಸದೆ ಟಿಕೆಟ್‌ ನಿರಾಕರಣೆ ಮಾಡಿದ್ದಾರೆ ಎಂದು ತೇಜಸ್ವಿನಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಟಿಕೆಟ್‌ ನಿರಾಕರಣೆ ಮಾಡಿದ್ದು ಏಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅನಂತ್ ಕುಮಾರ್ ಬೆಂಬಲಿಗರು ಪಟ್ಟು ಹಿಡಿದಿದ್ದರು. ಇದೀಗ, ಅವರಿಗೆ ಪಕ್ಷವು ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸುವ ಯತ್ನ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.