ಬೆಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ಪರಿಚಯವಾಗಿದ್ದ ಸೈಬರ್ ವಂಚಕರು, ಹೂಡಿಕೆ ಹೆಸರಿನಲ್ಲಿ ನಗರದ ನಿವಾಸಿಯೊಬ್ಬರಿಂದ ₹ 85 ಸಾವಿರ ಪಡೆದು ವಂಚಿಸಿದ್ದಾರೆ.
ವಂಚನೆಗೀಡಾಗಿರುವ ಟಿ.ಆರ್.ನಗರದ ನಿವಾಸಿ ಶ್ರೀಗಣೇಶ್ ಎಂಬುವರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
‘ಇತ್ತೀಚೆಗೆ ಶ್ರೀಗಣೇಶ್ ಅವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು, ‘ಕ್ರಿಪ್ಟೋ ಕರೆನ್ಸಿಯನ್ನು ಖರೀದಿಸಿ, ಅದನ್ನು ಬಿಟ್ಕಾಯಿನ್ ರೂಪದಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ. ಆರಂಭದಲ್ಲಿ ಹಣ ಪಾವತಿಸಿ ಬಿಟ್ ಕಾಯಿನ್ ಖರೀದಿಸಬೇಕು’ ಎಂದಿದ್ದರು. ಅದನ್ನು ನಂಬಿದ್ದ ಯುವಕ, ಆರೋಪಿಗಳ ಖಾತೆಗಳಿಗೆ ಹಂತ ಹಂತವಾಗಿ ₹ 85 ಸಾವಿರ ಜಮೆ ಮಾಡಿದ್ದಾರೆ. ನಂತರ ಆರೋಪಿಗಳು ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.