ಬೆಂಗಳೂರು: ನಗರದ ಪ್ರತಿಷ್ಠಿತ ತೆಲುಗು ವಿಜ್ಞಾನ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಎ.ಆರ್. ರಾಧಾಕೃಷ್ಣ ರಾಜು ಪುನರಾಯ್ಕೆಯಾದರು.
‘ರಾಧಾಕೃಷ್ಣನ್ ಅವರು 68 ವರ್ಷಗಳಿಂದ ತೆಲುಗು ಮತ್ತು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಗಳ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಥಮ ಬಾರಿಗೆ ಕೃಷ್ಣದೇವರಾಯ ಕಲಾಮಂದಿರ ನಿರ್ಮಿಸಿದ್ದಾರೆ’ ಎಂದಿರುವ ತೆಲುಗು ವಿಜ್ಞಾನ ಸಮಿತಿಯ ಕಾರ್ಯಕಾರಿ ಸಮಿತಿಯು, ರಾಧಾಕೃಷ್ಣರಾಜು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.