ADVERTISEMENT

ದೇವಿ ಮೂರ್ತಿ ಮಾಂಗಲ್ಯ ಕದ್ದಿದ್ದವ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 6:31 IST
Last Updated 9 ಜುಲೈ 2022, 6:31 IST

ಬೆಂಗಳೂರು: ಮಾರತ್ತಹಳ್ಳಿ ಯಮಲೂರು ಮುಖ್ಯರಸ್ತೆಯ ಚೌಡೇಶ್ವರಿ ದೇವಸ್ಥಾನದ ದೇವಿಯ ಚಿನ್ನದ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಜೆ.ಪಿ. ನಗರದ ಜರಗನಹಳ್ಳಿ ನಿವಾಸಿ ಚಂದ್ರಶೇಖರ್, ಪದೇಪದೇ ಅಪರಾಧ ಕೃತ್ಯ ಎಸಗುತ್ತಿದ್ದ. ಈತನಿಂದ ₹ 3 ಲಕ್ಷ ಮೌಲ್ಯದ 65 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಜುಲೈ 4ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗರ್ಭಗುಡಿಯೊಳಗೆ ನುಗ್ಗಿದ್ದ ಆರೋಪಿ, ಮಾಂಗಲ್ಯ ಸರ ಕದ್ದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ದಾಖಲಾದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಮೂರು ಕಡೆ ಕಳ್ಳತನ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.