ADVERTISEMENT

ಬೆಂ.ವಿವಿ| ಪೊಲೀಸ್ ಭದ್ರತೆಯಲ್ಲಿ ದೇಗುಲ ಕಾಮಗಾರಿ: ಎಂಜಿನಿಯರ್ ಅಮಾನತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 19:50 IST
Last Updated 9 ಸೆಪ್ಟೆಂಬರ್ 2022, 19:50 IST
   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಗಣೇಶ ದೇವಸ್ಥಾನ ನಿರ್ಮಾಣಕ್ಕಾಗಿ ಪೊಲೀಸ್ ಭದ್ರತೆಯಲ್ಲಿ ಗುರುವಾರ ಕಾಮಗಾರಿ ಆರಂಭಿಸಲಾಯಿತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಶಿಕ್ಷಕರು ಹಾಗೂ ಕೆಲ ವಿದ್ಯಾರ್ಥಿಗಳು, ‘ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

ಕುಲಪತಿ ಅವರಿಗೆ ಮನವಿ ಸಲ್ಲಿಸಿರುವ ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕರ ಪರಿಷತ್ ಸದಸ್ಯರು, ‘ಯಾವುದೇ ಅನುಮತಿ ಪಡೆಯದೇ ದೇವಸ್ಥಾನ ನಿರ್ಮಿಸಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕರನ್ನು ಕಿಡಿಗೇಡಿಗಳೆಂದು ಅವಮಾನಿಸಲಾಗಿದೆ. ಈ ಅನಧಿಕೃತ ಕಾಮಗಾರಿಗೆ ಕಾರಣವಾಗಿರುವ ರಾಜರಾಜೇಶ್ವರಿನಗರ ವಲಯದ ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್ ಅವರನ್ನು ಅಮಾನತು ಮಾಡಲು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT