ಬೆಂಗಳೂರು: ಏಕದಿನ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹ 10.45 ಲಕ್ಷ ಜಪ್ತಿ ಮಾಡಿದ್ದಾರೆ.
‘ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಬಳಿಯ ಕಾವಲ್ಭೈರಸಂದ್ರದ ಮುನಿನಾಗಪ್ಪ ಬಡಾವಣೆಯಲ್ಲಿ ಜೂನ್ 1ರಂದು ಆರೋಪಿಗಳು ಸುತ್ತಾಡುತ್ತಿದ್ದರು. ದಾಳಿ ಮಾಡಿ ಅವರಿಬ್ಬರನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ನೆದರ್ಡ್ಲ್ಯಾಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಪಂದ್ಯಾವಳಿ ಮೇಲೆ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಇದಕ್ಕಾಗಿ ಕೆಲ ಆ್ಯಪ್ಗಳನ್ನು ಬಳಸುತ್ತಿದ್ದರು. ಪಂದ್ಯಗಳ ಸೋಲು–ಗೆಲುವು ಆಧಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಗೆದ್ದವರಿಗೆ ಖುದ್ದು ಹೋಗಿ ಹಣ ನೀಡುತ್ತಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.