ಕೆ.ಆರ್.ಪುರ: ಖಾಸಗಿ ಬಸ್ ಮನೆಗೆ ನುಗ್ಗಿ ಸಹೋದರರಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಅವಲಹಳ್ಳಿ ಠಾಣೆ ವ್ಯಾಪ್ತಿಯ ಮಂಡೂರಿನಲ್ಲಿ ಜರುಗಿದೆ.
ಮಂಡೂರು ನಿವಾಸಿ ದೇವರಾಜ್ ಹಾಗೂ ನಂದನ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಬೆಳಿಗ್ಗೆ ಟಿಸಿಎಲ್ ಕಂಪನಿಗೆ ಸೇರಿದ ಬಸ್ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ನೇರವಾಗಿ ಮನೆಗೆ ನುಗ್ಗಿದೆ. ಚಾಲಕ ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.