ADVERTISEMENT

ಬೆಂಗಳೂರು | ವಾಯುಸೇನೆ ಜಾಗಕ್ಕೆ ಅಕ್ರಮ ಪ್ರವೇಶ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2023, 16:05 IST
Last Updated 20 ಆಗಸ್ಟ್ 2023, 16:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ನಗರದ ಎಚ್​ಎಎಲ್​ ಬಳಿಯ ವಾಯುಸೇನೆ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ರಾಜ್‌ಕುಮಾರ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

‘ಪಶ್ಚಿಮ ಬಂಗಾಳದ ರಾಜ್‌ಕುಮಾರ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ವಾಯುಸೇನೆ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದಾರೆ. ಅಕ್ರಮ ಪ್ರವೇಶ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ನೀಲಿ ಬಣ್ಣದ ಕುರ್ತಾ ಧರಿಸಿದ್ದ ರಾಜ್‌ಕುಮಾರ್, ಪಾನಮತ್ತನಾಗಿ ವಾಯುಸೇನೆಯ ತಾಂತ್ರಿಕ ವಿಭಾಗದ ಜಾಗದೊಳಗೆ ಹೋಗಿದ್ದ.  ಆತನನ್ನು ನೋಡಿದ್ದ ಭದ್ರತಾ ಸಿಬ್ಬಂದಿ, ಸುತ್ತುವರೆದು ಹಿಡಿದಿದ್ದರು. ಆರೋಪಿಯನ್ನು ವಿಚಾರಣೆ ಮಾಡಲಾಗಿದೆ. ಈತನ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ’ ಎಂದು ತಿಳಿಸಿವೆ.

ADVERTISEMENT

‘ವಾಯುಸೇನೆ ಜಾಗದ ಸುತ್ತಮುತ್ತ ಭದ್ರತೆ ಹೆಚ್ಚಿದೆ. ಇದರ ನಡುವೆಯೇ ಆರೋಪಿ, ಒಳಗೆ ನುಗ್ಗಿದ್ದಾನೆ. ಮದ್ಯದ ಅಮಲಿನಲ್ಲಿ ತನಗೆ ಅರಿವಿಲ್ಲದಂತೆ ಒಳಗೆ ಹೋಗಿದ್ದಾಗಿ ಆತ ಹೇಳುತ್ತಿದ್ದಾನೆ’ ಎಂದು ಮೂಲಗಳು ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.