ಬೆಂಗಳೂರು: ‘ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡಲ್ಲಿ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಲೆಕ್ಕಪರಿಶೋಧಕರು (ಸಿಎ) ಇಂತಹ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡರೆ ಅವರನ್ನು ಅವಲಂಬಿಸಿದ ಉದ್ಯಮಗಳು ಯಶಸ್ಸು ಕಾಣುತ್ತವೆ’ ಐಐಎಂನ
ಪ್ರೊ. ಕೆ. ಕುಮಾರ್ ಅಭಿಪ್ರಾಯಪಟ್ಟರು.
ಇಲ್ಲಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ ಲೆಕ್ಕಪರಿಶೋಧಕ ವಿದ್ಯಾರ್ಥಿ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಲೆಕ್ಕ ಪರಿಶೋಧಕರು ಆರ್ಥಿಕ ಚಟುವಟಿಕೆಗಳನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ’ ಎಂದರು.
ಐಸಿಎಐನ ಮಾಜಿ ಅಧ್ಯಕ್ಷ ಕೆ. ರಘು ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ಐಆರ್ಸಿ ಮುಖ್ಯಸ್ಥ ಜೋಮನ್ ಕೆ. ಜಾರ್ಜ್, ಪದಾಧಿಕಾರಿಗಳಾದ ಎಸ್. ಪನ್ನಾ ರಾಜ್, ಎ.ಬಿ. ಗೀತಾ, ಶಿವರಾಮ್ ಶಂಕರ್ ಭಟ್, ಎಸ್ಐಸಿಎಎಸ್ಎನ ಅಧ್ಯಕ್ಷೆ ಎಸ್. ದಿವ್ಯಾ ಮೊದಲಾದವರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.