ಬೆಂಗಳೂರು: ಹೆಗಡೆನಗರದ ಎರಡನೇ ಅಡ್ಡರಸ್ತೆಯಲ್ಲಿರುವ ನಾಗಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಬಾಗಿಲಿನ ಬೀಗ ಒಡೆದು ಕಳ್ಳರು, ದೇವರ ಹುಂಡಿ ಕಳವು ಮಾಡಿದ್ದಾರೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಹೆಗಡೆನಗರದ ಸುತ್ತಮುತ್ತ ಪೊಲೀಸ್ ಭದ್ರತೆ ಇದ್ದರೂ, ಕಳವು ನಡೆದಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.
ಸಮೀಪದಲ್ಲೇ ದೇವಸ್ಥಾನದ ಅರ್ಚಕರ ಮನೆ ಇದೆ. ಕಳ್ಳರು ಆ ಮನೆಗೆ ಹೊರಗಿನಿಂದ ಲಾಕ್ ಹಾಕಿ ಈ ಕೃತ್ಯ ಎಸಗಿದ್ದಾರೆ. ಬೆಳಿಗ್ಗೆ ಕಳವು ನಡೆದಿರುವುದು ಬಯಲಿಗೆ ಬಂದಿದೆ.
ದೇವಸ್ಥಾನದ ಕುರಿತು ಸಂಪೂರ್ಣ ಮಾಹಿತಿ ಇರುವವರೇ ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.