ADVERTISEMENT

ಅರಣ್ಯ ಇಲಾಖೆಯ ಕಾರ್ಯಾಚರಣೆ: ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:08 IST
Last Updated 17 ಆಗಸ್ಟ್ 2024, 16:08 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಆನೆ ದಂತಗಳನ್ನು ಸಾಗಿಸುತ್ತಿದ್ದ ಮೂವರನ್ನು ರಾಜನುಕುಂಟೆ ಸಮೀಪದ ಸಾದರಹಳ್ಳಿ ಬಳಿ ಬಂಧಿಸಿದ್ದಾರೆ.

ಮೋಹನ್, ಆನಂದ್ ಹಾಗೂ ವಿನೋದ್ ಬಂಧಿತ ಆರೋಪಿಗಳು. ಬಂಧಿತರಿಂದ 8.5 ಕೆ.ಜಿ. ಮತ್ತು 9 ಕೆ.ಜಿ ತೂಕದ ಎರಡು ಆನೆ ದಂತಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಖಚಿತ ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆರೋಪಿಗಳು ತೆರಳುತ್ತಿದ್ದ ವಾಹನ ತಡೆದು ತ‍‍ಪಾಸಣೆ ನಡೆಸಿದರು. ‘ಎರಡು ಆನೆ ದಂತಗಳು ಪತ್ತೆಯಾಗಿವೆ. ಈ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.