ಬೆಂಗಳೂರು: ನಗರದಮಲ್ಲೇಶ್ವರ ಅರಣ್ಯ ಭವನದ ಎದುರು ಬೃಹತ್ ಮರಗಳು ಕಾರುಗಳ ಮೇಲೆ ಬಿದ್ದ ಪರಿಣಾಮ ಮೂರು ಕಾರುಗಳು ಜಖಂಗೊಂಡಿವೆ.
ಮಲ್ಲೇಶ್ವರ18ನೇ ಕ್ರಾಸ್ನಲ್ಲಿರುವ ಮರಗಳು ಧರೆಗೆ ಬಿದ್ದ ಪರಿಣಾಮ ಕೆಳಗೆ ನಿಲ್ಲಿಸಿದ್ದ ಸಾರ್ವಜನಿಕರ ಕಾರುಗಳು ಜಖಂಗೊಂಡಿವೆ. ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ ನಂತರ ಎಲ್ಲರೂ ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸಲು ಪ್ರಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.