ADVERTISEMENT

ಟಿಕ್‌ಟಾಕ್‌ನಲ್ಲಿ ಪರಿಚಯವಾಗಿ ವಂಚನೆ; ಠಾಣೆಗೆ ಮಹಿಳೆ ಹಾಜರು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 19:19 IST
Last Updated 10 ಡಿಸೆಂಬರ್ 2019, 19:19 IST
   

ಬೆಂಗಳೂರು: ಟಿಕ್‌ಟಾಕ್ ಮೊಬೈಲ್ ಆ್ಯಪ್‌ನಲ್ಲಿ ಪರಿಚಯವಾಗಿ ಮದುವೆ ಆಗುವುದಾಗಿ ಹೇಳಿ ₹4 ಲಕ್ಷ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ವಿಜಯಲಕ್ಷ್ಮಿ ಎಂಬುವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ವಕೀಲರ ಸಮೇತ ಡಿ.ಜೆ.ಹಳ್ಳಿ ಠಾಣೆಗೆ ಮಂಗಳವಾರ ಹಾಜರಾದ ವಿಜಯಲಕ್ಷ್ಮಿ, ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿದರು.

‘ವಿಜಯಲಕ್ಷ್ಮಿ ಟಿಕ್‌ಟಾಕ್‌ನಲ್ಲಿ ವಿಡಿಯೊ ಹಾಕುತ್ತಿದ್ದರು. ಅದನ್ನು ಮೆಚ್ಚಿ ಸಂದೇಶ ಕಳುಹಿಸಿದ್ದೆ. ನಮ್ಮಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಮದುವೆ ಆಗುವುದಾಗಿ ಹೇಳಿದ್ದ ಅವರು ₹ 4 ಲಕ್ಷ ಪಡೆದಿದ್ದರು. ಮದುವೆಯಾಗಲು ನಿರಾಕರಿಸುತ್ತಿರುವ ಅವರು ಹಣವನ್ನು ವಾಪಸು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಶಿವಕುಮಾರ್ ಎಂಬುವರು ದೂರು ನೀಡಿದ್ದರು. ಅದರನ್ವಯ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

‘ಪ್ರಕರಣ ದಾಖಲಾದಾಗಿನಿಂದ ಮಹಿಳೆ ತಲೆಮರೆಸಿಕೊಂಡಿದ್ದರು. ಈಗ ಜಾಮೀನು ಪಡೆದಿರುವ ಅವರು ಠಾಣೆಗೆ ಬಂದು ಹೇಳಿಕೆ ನೀಡಿ ಹೋಗಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.