ADVERTISEMENT

ಕೈ–ಕಮಲ ‘ತಿಲಕ’ ಗಲಾಟೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 19:37 IST
Last Updated 7 ಮಾರ್ಚ್ 2019, 19:37 IST
   

ಬೆಂಗಳೂರು: ‘ತಿಲಕ ಹಾಕಿಕೊಂಡವರನ್ನು ನೋಡಿದರೆ ಭಯವಾಗುತ್ತದೆ’ ಎಂಬ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಗುರುವಾರವೂ ಮುಂದುವರಿದಿದೆ.

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಸಿದ್ದರಾಮಯ್ಯ ಅವರು, ‘ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖ ತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ, ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್‌ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ?’ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಟ್ವಿಟರ್‌ನಲ್ಲಿ ತೀಕ್ಷ್ಮ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ, ‘ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಇದ್ದಾರೆ. ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ. ಆದರೆ, ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ. ಸಾಮಾನ್ಯರ ತರ ಕಾಣುತ್ತಾರೆ. ಆದರೆ, ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ. ಏನಿವಾಗ’ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.