ADVERTISEMENT

‘ಟಿಪ್ಪು ಸುಲ್ತಾನ್‌ ಮಹಾನ್ ದೇಶಭಕ್ತ’

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 20:23 IST
Last Updated 10 ನವೆಂಬರ್ 2018, 20:23 IST
   

ಹೊಸಕೋಟೆ: ‘ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ವೀರ ಟಿಪ್ಪು ಸುಲ್ತಾನ್’ ಎಂದು ಶಾಸಕ ಎನ್.ನಾಗರಾಜು ಬಣ್ಣಿಸಿದರು.

ತಾಲ್ಲೂಕು ಆಡಳಿತ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

‘ಬಿಜೆಪಿ ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಲಾಗಿತ್ತು. ಈಗ ವಿರೋಧ ಮಾಡುತ್ತಿರುವುದು ಏಕೆ’ ಎಂದು ಪ್ರಶ್ನಿಸಿದರು.

ADVERTISEMENT

‘ಭಾರತ ಜಾತ್ಯತೀತ ದೇಶ. ಮೊದಲಿನಿಂದಲೂ ಎಲ್ಲ ಜನಾಂಗದವರು ಒಟ್ಟಾಗಿ ಹಬ್ಬಗಳನ್ನು ಆಚರಿಸಿಕೊಂಡು ಬಂದಿದ್ದೇವೆ. ಅದು ಮುಂದುವರಿಯಬೇಕು. ಸಮಾಜ ಒಡೆಯುವ ಕೆಲಸವನ್ನು ಯಾರೂ ಮಾಡಬಾರದು’ ಎಂದರು.

ನಂತರ ಮುಸ್ಲಿಮರು, ಶಾಸಕರಿಗೆ ಖಡ್ಗ ನೀಡಿ ಸನ್ಮಾನಿಸಿದರು. ತಹಶೀಲ್ದಾರ್ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.