ADVERTISEMENT

ನಾಳೆ ‘ನಿಮ್ಮಬಸ್ ಎಕ್ಸ್‌ಪ್ರೆಸ್‌’ ಯಾತ್ರೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 20:30 IST
Last Updated 9 ಡಿಸೆಂಬರ್ 2019, 20:30 IST
   

ಬೆಂಗಳೂರು:ಬಸ್ ಪ್ರಯಾಣಿಕರ ವೇದಿಕೆ, ಸಿಟಿಜನ್ ಫಾರ್ ಬೆಂಗಳೂರು, ಬೆಳ್ಳಂದೂರು ಜೊತೆಗೆ,ವೈಟ್‌ಫೀಲ್ಡ್ ರೈಸಿಂಗ್ ಸಂಘಟನೆಗಳು ಇದೇ 11ರಂದು (ಬುಧವಾರ) ‘ನಿಮ್ಮಬಸ್ ಎಕ್ಸ್‌ಪ್ರೆಸ್’ ಯಾತ್ರೆ ಆಯೋಜಿಸಿವೆ.

‘ಬೆಳಿಗ್ಗೆ 9 ಗಂಟೆಗೆ ಸಿಲ್ಕ್ ಬೋರ್ಡ್‌ ಜಂಕ್ಷನ್ ಮತ್ತು 10 ಗಂಟೆಗೆ ಮಾರತಹಳ್ಳಿ ಸ್ಕೈವಾಕ್ ಬಳಿಯಿಂದ ಯಾತ್ರೆ ಆರಂಭವಾಗಲಿದೆ. ಬಿಎಂಟಿಸಿ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಕಮಿಷನರ್, ನಗರ ಭೂಸಾರಿಗೆ ನಿರ್ದೇಶನಾಲಯದ (ಡಲ್ಟ್‌) ಅಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದು ಬಸ್ ಪ್ರಯಾಣಿಕರ ವೇದಿಕೆ ತಿಳಿಸಿದೆ.

ಬಸ್‌ ಬಳಕೆ ಉತ್ತೇಜಿಸಲು ಹಮ್ಮಿಕೊಂಡ ಈ ಅಭಿಯಾನದಲ್ಲಿ ಚಿತ್ರನಟ ಚೇತನ್‌,ಅಶ್ವಿನ್ ಶರ್ಮ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ. ಗಾಯಕಿ ಎಂ.ಡಿ.ಪಲ್ಲವಿ ಸಹಿತಪ್ರಸಿದ್ಧ ಸಂಗೀತಗಾರರೂ ಯಾತ್ರೆ ಯುದ್ಧಕ್ಕೂ ಹಾಡಲಿದ್ದಾರೆ. ‌

ADVERTISEMENT

ಸ್ವರಾತ್ಮ ಕನ್ನಡ ಜಾನಪದ ರಾಕ್‌ ಬ್ಯಾಂಡ್‌ ಈ ಕುರಿತು ವಿಶೇಷ ಕಾರ್ಯಕ್ರಮ ನಡೆಸಿಕೊಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.