ಬೆಂಗಳೂರು: ನಗರದಲ್ಲಿ ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸಿದ್ದವರಿಂದ ₹ 30.03 ಲಕ್ಷ ದಂಡ ಸಂಗ್ರಹಿಸಲಾಗಿದೆ.
‘ನಿಯಮ ಉಲ್ಲಂಘಿಸುವವರನ್ನು ಪತ್ತೆ ಮಾಡಿ ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಶುಕ್ರವಾರ ಒಂದೇ ದಿನದಲ್ಲೇ 9491 ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ತಿಳಿಸಿದರು.
‘ಸಿಗ್ನಲ್ ಜಂಪ್, ತಪ್ಪು ನಿಲುಗಡೆ, ಸವಾರ ಹಾಗೂ ಹಿಂಬದಿ ಸವಾರ ಹೆಲ್ಮೆಟ್ ಧರಿಸದ ಪ್ರಕರಣಗಳೇ ಹೆಚ್ಚಿವೆ. ಪಾನಮತ್ತರಾಗಿ ವಾಹನ ಚಲಾಯಿಸಿದ್ದ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪತ್ತೆ ಮಾಡಿ ನೋಟಿಸ್ ನೀಡಲಾಗಿದ್ದು, ನ್ಯಾಯಾಲಯವೇ ದಂಡ ವಿಧಿಸಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.