ADVERTISEMENT

₹ 8.07 ಕೋಟಿ ದಂಡ ಸಂಗ್ರಹ: ರಿಯಾಯಿತಿಗೆ ಇಂದು ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2023, 17:32 IST
Last Updated 8 ಸೆಪ್ಟೆಂಬರ್ 2023, 17:32 IST
<div class="paragraphs"><p> ಸಂಗ್ರಹ ಚಿತ್ರ</p></div>

ಸಂಗ್ರಹ ಚಿತ್ರ

   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಜುಲೈ 6ರಿಂದ ಸೆ. 8ರವರೆಗೆ ₹ 8.07 ಕೋಟಿ ದಂಡ ಸಂಗ್ರಹವಾಗಿದೆ.

2023ರ ಫೆಬ್ರುವರಿ 11ರೊಳಗಿನ ಪ್ರಕರಣಗಳಿಗೆ ರಿಯಾಯಿತಿ ಸೌಲಭ್ಯ ನೀಡಲಾಗಿದೆ. ಮೊದಲ ದಿನದಿಂದಲೂ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಆನ್‌ಲೈನ್ ಹಾಗೂ ಆಪ್‌ಲೈನ್‌ ಮೂಲಕ ಜನರು ದಂಡ ತುಂಬುತ್ತಿದ್ದಾರೆ.

ADVERTISEMENT

‘ಇದುವರೆಗೂ 2.53 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ. ರಿಯಾಯಿತಿ ಸೌಲಭ್ಯ ಪಡೆಯಲು ಸೆಪ್ಟೆಂಬರ್ 9 ಕೊನೆ ದಿನವಾಗಿದೆ’ ಎಂದು ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.