ADVERTISEMENT

ದುಬಾರಿ ದಂಡ: ಕೇಂದ್ರದ ಗಮನಕ್ಕೆ –ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 19:47 IST
Last Updated 9 ಸೆಪ್ಟೆಂಬರ್ 2019, 19:47 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ದಂಡ ವಿಧಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಈ ವಿಚಾರವನ್ನು ಕೇಂದ್ರದ ಗಮನಕ್ಕೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

‘ದಂಡದ ಪ್ರಮಾಣವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಇದು ಯುಪಿಎ ಸರ್ಕಾರದ ಅವಧಿಯಲ್ಲೇ ಪ್ರಸ್ತಾಪವಾಗಿದ್ದು, ಜಂಟಿ ಸದನ ಸಮಿತಿ ಒಪ್ಪಿಗೆ ನೀಡಿದೆ. ಈ ಸಮಿತಿಯಲ್ಲಿ ಇತರ ಪಕ್ಷಗಳ ಸಂಸದರು ಇರುತ್ತಾರೆ. ಹಾಗಾಗಿ ಎಲ್ಲ ಪಕ್ಷದವರ ಅಭಿಪ್ರಾಯ ಪಡೆದ ನಂತರ ಕಾನೂನು ಜಾರಿಯಾಗಿದೆ’ ಎಂದರು. ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ಕೊಡಲು ನಿರ್ಧರಿಸಲಾಗಿದ್ದು, ಮುಂದಿನ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT