ಬೆಂಗಳೂರು: ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂವರು ಸಾಫ್ಟ್ವೇರ್ ಎಂಜಿನಿಯರ್ಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಪ್ರಶಾಂತ್ ಬಾಬು (26), ಬಿಟಿಎಂ ಲೇಔಟ್ನ ವಿನೋದ್ (27), ಬನಶಂಕರಿ ನಿವಾಸಿ ವಿಜಯ್ (38) ಬಂಧಿತರು. ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
‘ಭಾನುವಾರ ನಸುಕಿನಲ್ಲಿ ಐಶ್ವರ್ಯ ಜಂಕ್ಷನ್ ಬಳಿಯ ಬಾರ್ ಮುಂದೆ ಆರೋಪಿಗಳು ಗಲಾಟೆ ಮಾಡುತ್ತಿದ್ದರು. ಸ್ಥಳೀಯರು ನೀಡಿದ್ದ ಮಾಹಿತಿಯಂತೆ ಎಎಸ್ಐ ಕೆ.ನಾಗರಾಜ್ ಹಾಗೂ ಕಾನ್ಸ್ಟೆಬಲ್ ಬಿ.ಕೃಷ್ಣ ಸ್ಥಳಕ್ಕೆ ಹೋಗಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
‘ಪೊಲೀಸರು ಆರೋಪಿಗಳಿಗೆ ಬುದ್ದಿವಾದ ಹೇಳಿ ಮನೆಗೆ ಹೋಗುವಂತೆ ವಿನಂತಿಸಿದ್ದರು. ಅಷ್ಟಕ್ಕೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದರು. ಸ್ಥಳಕ್ಕೆ ಹೋಗಿದ್ದ ಹೊಯ್ಸಳ ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.