ADVERTISEMENT

ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ: ಒಂದೇ ದಿನ ₹4.18 ಕೋಟಿ ದಂಡ ಪಾವತಿ

ಮೊದಲ ದಿನ 1.48 ಲಕ್ಷ ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 20:20 IST
Last Updated 23 ಆಗಸ್ಟ್ 2025, 20:20 IST
ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ರಾಡಾರ್‌ ಗನ್‌ ಬಳಸುತ್ತಿರುವ ಬಳ್ಳಾರಿಯ ಸಂಚಾರ ಪೊಲೀಸರು (ಸಾಂದರ್ಭಿಕ ಚಿತ್ರ)
ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ರಾಡಾರ್‌ ಗನ್‌ ಬಳಸುತ್ತಿರುವ ಬಳ್ಳಾರಿಯ ಸಂಚಾರ ಪೊಲೀಸರು (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಶನಿವಾರ ₹4.18 ಕೋಟಿ ದಂಡ ಪಾವತಿಯಾಗಿದೆ. 1,48,747 ಪ್ರಕರಣಗಳು ನಗರದಲ್ಲಿ ಇತ್ಯರ್ಥವಾಗಿವೆ ಎಂದು ಸಂಚಾರ ಪೊಲೀಸರು ಹೇಳಿದರು.

ಸೆಪ್ಟೆಂಬರ್ 12ರ ವರೆಗೆ ದಂಡ ಪಾವತಿಸಲು ಅವಕಾಶವಿದೆ.

ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್​​​ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು. ಬಳಿಕ, ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ, ದಂಡದ ಮೊತ್ತ ಪಾವತಿಸಬಹುದು ಎಂದು ಸಂಚಾರ ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.