ADVERTISEMENT

ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ ರೈಲು ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 22:19 IST
Last Updated 16 ನವೆಂಬರ್ 2019, 22:19 IST

ಬೆಂಗಳೂರು: ರೈಲು ಹಳಿ ಸಮೀಪದಲ್ಲಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವೇಳೆ ಮೆಮೂ ರೈಲು ಡಿಕ್ಕಿ ಹೊಡೆದು ಒಬ್ಬ ಮೃತಪಟ್ಟ ಘಟನೆ ವೈಟ್‌ಫೀಲ್ಡ್‌ ಕಾವೇರಿ ನಗರದ ಬಳಿ ನಡೆದಿದೆ.

ಬಿಹಾರದ ಮಹೇಶ್ ದಾಸ್ (35) ಮೃತ ವ್ಯಕ್ತಿ. ಪೇಟಿಂಗ್ ಕೆಲಸ ಮಾಡುತ್ತಿದ್ದ ಮಹೇಶ್ ದಾಸ್, ಶುಕ್ರವಾರ ರಾತ್ರಿ ಹೂಡಿ ಸರ್ಕಲ್‌ಗೆ ಸ್ನೇಹಿತರ ಜತೆ ಬಂದು ಊಟ ಮಾಡಿದ್ದಾರೆ.

ರಾತ್ರಿ 9.30ರ ಸುಮಾರಿಗೆ ಸ್ನೇಹಿತರ ಜತೆ ಕಾವೇರಿ ನಗರದ ಮನೆಗೆ ವಾಪಸು ಹೋಗಲು, ಹತ್ತಿರ ದಾರಿ ಎಂಬ ಕಾರಣಕ್ಕೆ ರೈಲ್ವೆ ಹಳಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ADVERTISEMENT

ರೈಲು ಡಿಕ್ಕಿ ಹೊಡೆದ ಪರಿಣಾಮ ಮಹೇಶ್ ದಾಸ್ ಸುಮಾರು 15 ಅಡಿ ದೂರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದರು. ದಂಡು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.