ADVERTISEMENT

ಕೆಎಎಸ್‌, ಪಿಎಸ್‌ಐ ಪರೀಕ್ಷೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2023, 0:30 IST
Last Updated 20 ಆಗಸ್ಟ್ 2023, 0:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರಿನ ಆರ್‌.ಎಲ್‌.ಜಾಲಪ್ಪ ಅಕಾಡೆಮಿಯು (ನೆಲಮಂಗಲದಿಂದ 21 ಕಿ.ಮೀ ದೂರ) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಾಮೀಣ ಪ್ರದೇಶದ ಪದವೀಧರ ಯುವಕ–ಯುವತಿಯರಿಗೆ ನಾಲ್ಕು ತಿಂಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿದೆ.

ಕೆಎಎಸ್‌, ಪಿಎಸ್‌ಐ, ಎಸ್‌ಡಿಎ, ಎಫ್‌ಡಿಎ ಪರೀಕ್ಷೆಗೆ ಸೆ.15ರಿಂದ ತರಬೇತಿ ಆರಂಭವಾಗಲಿದೆ. ವೆಬ್‌ಸೈಟ್‌: www.rljacademy.inನಲ್ಲಿ ಆಸಕ್ತರು ಸೆ.10ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಮಾಹಿತಿಗೆ 99006 06042, 97314 80759.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.