ಬೆಂಗಳೂರು: ವಿಧಾನ ಸಭೆಯಲ್ಲಿ ವಿಶ್ವಾಸ ನಿರ್ಣಯದಮೇಲೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದೆ.
ಶುಕ್ರವಾರ 17 ತಹಶೀಲ್ದಾರ್ಗಳನ್ನು ವರ್ಗಾವಣೆ ಮಾಡಲಾಗಿದೆ.ಮೈತ್ರಿ ಪಕ್ಷಗಳ ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದರೂ ಅಧಿಕಾರಿಗಳ ವರ್ಗಾವಣೆ ನಿಂತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ನಡುವೆಯೂ ವರ್ಗಾವಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.