ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿದ್ದ ರಂಗಪ್ಪ ಎಸ್ (ಕೆಎಎಸ್ ಆಯ್ಕೆ ಶ್ರೇಣಿ) ಅವರು ವರ್ಗಾವಣೆಗೊಂಡು ಇನ್ನೇನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎನ್ನುವಷ್ಟರಲ್ಲೇ ವರ್ಗಾವಣೆ ಆದೇಶವೇ ರದ್ದುಗೊಂಡಿದೆ!
ಬಿಡಿಎ ಕಾರ್ಯದರ್ಶಿ ಹುದ್ದೆ ಆಯಕಟ್ಟಿನ ಸ್ಥಾನ ಎಂದೇ ಪರಿಗಣಿಸಲಾಗಿದೆ. ಆ ಹುದ್ದೆಯಲ್ಲಿದ್ದ ಬಿ.ವಿ. ವಾಸಂತಿ ಅಮರ್(ಕೆಎಎಸ್ ಆಯ್ಕೆ ಶ್ರೇಣಿ) ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಇದೇ 19ರಂದು ವರ್ಗಾವಣೆ ಮಾಡಲಾಗಿತ್ತು.
ಅದೇ ರೀತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಡಿ.ಬಿ. ನಟೇಶ್ ಅವರನ್ನು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಂಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದ ಆದೇಶವನ್ನೂ ರದ್ದುಪಡಿಸಲಾಗಿದೆ. ಹೀಗಾಗಿ, ಶೀಲವಂತ ಎಂ. ಶಿವಕುಮಾರ್ ಅವರು ಜಂಟಿ ನಿರ್ದೇಶಕರಾಗಿ
ಮುಂದುವರಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.