ADVERTISEMENT

ಎರಡನೇ ದಿನಕ್ಕೆ ವರ್ಗಾವಣೆ ರದ್ದು!

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 22:10 IST
Last Updated 21 ಜೂನ್ 2021, 22:10 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿದ್ದ ರಂಗಪ್ಪ ಎಸ್‌ (ಕೆಎಎಸ್‌ ಆಯ್ಕೆ ಶ್ರೇಣಿ) ಅವರು ವರ್ಗಾವಣೆಗೊಂಡು ಇನ್ನೇನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎನ್ನುವಷ್ಟರಲ್ಲೇ ವರ್ಗಾವಣೆ ಆದೇಶವೇ ರದ್ದುಗೊಂಡಿದೆ!

ಬಿಡಿಎ ಕಾರ್ಯದರ್ಶಿ ಹುದ್ದೆ ಆಯಕಟ್ಟಿನ ಸ್ಥಾನ ಎಂದೇ ಪರಿಗಣಿಸಲಾಗಿದೆ. ಆ ಹುದ್ದೆಯಲ್ಲಿದ್ದ ಬಿ.ವಿ. ವಾಸಂತಿ ಅಮರ್‌(ಕೆಎಎಸ್‌ ಆಯ್ಕೆ ಶ್ರೇಣಿ) ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಇದೇ 19ರಂದು ವರ್ಗಾವಣೆ ಮಾಡಲಾಗಿತ್ತು.

ಅದೇ ರೀತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಡಿ.ಬಿ. ನಟೇಶ್‌ ಅವರನ್ನು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಂಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದ ಆದೇಶವನ್ನೂ ರದ್ದುಪಡಿಸಲಾಗಿದೆ. ಹೀಗಾಗಿ, ಶೀಲವಂತ ಎಂ. ಶಿವಕುಮಾರ್‌ ಅವರು ಜಂಟಿ ನಿರ್ದೇಶಕರಾಗಿ
ಮುಂದುವರಿಯಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.