ADVERTISEMENT

ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 19:03 IST
Last Updated 9 ಜೂನ್ 2021, 19:03 IST

ಬೆಂಗಳೂರು: ಅತ್ತಿಬೆಲೆ ಉಪವಿಭಾಗದಿಂದ ಚಂದಾಪುರ ಉಪವಿಭಾಗಕ್ಕೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಬೆಸ್ಕಾಂ ಎಂಜಿನಿಯರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಹಾಯಕ ಎಂಜಿನಿಯರ್‌ (ಎಲೆಕ್ಟ್ರಿಕಲ್) ಎಂ.ಸುರೇಶ್ ಅರ್ಜಿ ಸಲ್ಲಿಸಿ, ‘ಕೋವಿಡ್ ಕರ್ತವ್ಯದಲ್ಲಿ ಇರುವ ಕಾರಣ ವರ್ಗಾವಣೆ ಮಾಡಬಾರದು ಎಂದು ಸರ್ಕಾರ ಆದೇಶಿಸಿದೆ. ಆದರೂ, ಮುಖ್ಯಮಂತ್ರಿ ಅನುಮೋದನೆ ಇಲ್ಲದೆ ವರ್ಗಾವಣೆ ಆದೇಶ ಹೊರಡಿಸಲಾಗಿದೆ’ ಎಂದು ವಾದಿಸಿದ್ದಾರೆ.

‘ಐದು ಕಿಲೋ ಮೀಟರ್ ದೂರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೋವಿಡ್‌ ಕರ್ತವ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.