ADVERTISEMENT

ಇರಿತ: ತೃತೀಯ ಲಿಂಗಿ ಸಾವು

​ಪ್ರಜಾವಾಣಿ ವಾರ್ತೆ
Published 15 ಮೇ 2022, 19:25 IST
Last Updated 15 ಮೇ 2022, 19:25 IST

ಬೆಂಗಳೂರು: ಹಣದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ಚಾಕುವಿನಿಂದ ಇರಿದಿದ್ದರಿಂದ ಗಂಭೀರ ವಾಗಿ ಗಾಯಗೊಂಡಿದ್ದ ತೃತೀಯ ಲಿಂಗಿ ಅರ್ಚನಾ (25) ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

‘‌ಅರ್ಚನಾ ಹಾಗೂ ಸಂಜನಾ (30) ವಿಜಯನಗರದ ಮೂಡಲಪಾಳ್ಯದಲ್ಲಿ ನೆಲೆಸಿದ್ದರು. ಇವರು ಭಿಕ್ಷೆ ಬೇಡುತ್ತಿದ್ದರು. ಇದೇ 13ರ ರಾತ್ರಿ ಇವರಿಗೆ ಅಂಕಿತ್‌ ಕುಮಾರ್‌ (25) ಎಂಬಾತನ ಪರಿಚಯವಾಗಿತ್ತು. ಲೈಂಗಿಕ ಸಂಪರ್ಕದ ಉದ್ದೇಶದಿಂದ ಮೂವರೂ ಠಾಣಾ ವ್ಯಾಪ್ತಿಯ ಲಾಡ್ಜ್‌ವೊಂದಕ್ಕೆ ಹೋಗಿದ್ದರು. ಅಲ್ಲಿ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದರು’‍ ಎಂದು ಕಾಟನ್‌ಪೇಟೆ ಠಾಣೆ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT