ಬೆಂಗಳೂರು: ತಮ್ಮ ನಿವಾಸಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳ್ಳಿ ತಟ್ಟೆಯಲ್ಲಿ ಭೋಜನ ವ್ಯವಸ್ಥೆಯ ಆತಿಥ್ಯ ನೀಡಿದ್ದಾರೆ.
ಸುರ್ಜೇವಾಲಾ ಅವರಿಗೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಬರಮಾಡಿಕೊಂಡರು. ಭೋಜನ ಸಂದರ್ಭದಲ್ಲಿ ಶಾಸಕರಾದ ಪ್ರಿಯಾಂಕ ಖರ್ಗೆ, ಜಮೀರ್ ಅಹ್ಮದ್, ವಿಧಾನಪರಿಷತ್ ಸಚೇತಕ ಎಂ. ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.