ADVERTISEMENT

ಟಿಟಿಡಿಯಲ್ಲಿ ದರ್ಶನ: ಜ.1ರಂದು ವಿಶೇಷ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 23:20 IST
Last Updated 29 ಡಿಸೆಂಬರ್ 2019, 23:20 IST
   

ಬೆಂಗಳೂರು: ನಗರದ ವಯ್ಯಾಲಿಕಾವಲ್‌ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ನೂತನ ವರ್ಷ ಆರಂಭದ ದಿನವಾದ ಜನವರಿ 1ರಂದು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಬೆಳಿಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಜ.6ರಂದು ವೈಕುಂಠ ಏಕಾದಶಿ ಅಂಗವಾಗಿ ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಟಿಟಿಡಿ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷ ಡಿ. ಕುಪೇಂದ್ರ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನವರಿ 1ರಂದು ಸುಮಾರು 15 ಸಾವಿರ ಹಾಗೂ ವೈಕುಂಠ ಏಕಾದಶಿಯಂದು 60 ಸಾವಿರಕ್ಕೂ ಹೆಚ್ಚು ಭಕ್ತರು ಸ್ವಾಮಿಯ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಇದಕ್ಕೆ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ADVERTISEMENT

ತಿರುಪತಿಯ ದರ್ಶನದ ಮಾದರಿಯಲ್ಲಿ ಇಲ್ಲೂ ವ್ಯವಸ್ಥೆ ಮಾಡಲಾಗಿದೆ. ವೃದ್ಧರು, ಅಂಗವಿಕಲರು ಮತ್ತು ಗರ್ಭಿಣಿಯರಿಗೆ ವಿಶೇಷ ಪಾಸ್‌ಗಳನ್ನು ನೀಡಲಾಗುವುದು. ಇವರಿಗೆ ನೇರ ದರ್ಶನದ ವ್ಯವಸ್ಥೆ ಇರುತ್ತದೆ ಎಂದು ಕುಪೇಂದ್ರ ರೆಡ್ಡಿ ತಿಳಿಸಿದರು.

ಚೌಡಯ್ಯ ಸ್ಮಾರಕ ಭವನ ಮತ್ತು ವಯ್ಯಾಲಿಕಾವಲ್‌ ಎಜುಕೇಷನ್‌ ಸೊಸೈಟಿ ಆವರಣದಲ್ಲಿವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಎರಡು ದಿನವೂ ತಿರುಪತಿಯಿಂದ ತರಿಸಲಾದ ಲಡ್ಡುಗಳನ್ನು ವಿತರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.