ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ (ಬಿಬಿಎಂಪಿ) ತುಕಾರಾಮ ಕಲ್ಯಾಣಕರ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ–3 ಆಗಿದ್ದ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಎಲಿಷ ಆ್ಯಂಡ್ರೂಸ್ ಅವರನ್ನು ರಾಜ್ಯ ಸರ್ಕಾರ ಏಪ್ರಿಲ್ 22ರಂದು ಅಮಾನತು ಮಾಡಿತ್ತು. ಕಡತ ವಿಲೇವಾರಿ ವೇಳೆ ವಿಳಂಬ ಧೋರಣೆ ಅನುಸರಿಸಿದ ಹಾಗೂ ಸರ್ಕಾರಿ ನೌಕರರ ತರವಲ್ಲದ ವರ್ತನೆ ತೋರಿದ ಆರೋಪವನ್ನು ಅವರು ಎದುರಿಸುತ್ತಿದ್ದರು. ಕಳೆದ ಒಂದು ತಿಂಗಳಿಂದ ಉಪ ಕಾರ್ಯದರ್ಶಿ ಹುದ್ದೆ ಖಾಲಿ ಇತ್ತು.
ಸಂಘ ಪರಿವಾರದ ಹಿರಿಯ ಮುಖಂಡರೊಬ್ಬರ ಶಿಫಾರಸಿನ ಮೇರೆಗೆ ತುಕಾರಾಮ ಅವರನ್ನು ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯ ಸೇವೆಗೆ ಸೇರಿದ ತುಕಾರಾಮ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.