ADVERTISEMENT

ಜಿಮ್‌ ತರಬೇತುದಾರ ಸೇರಿ ಇಬ್ಬರ ಕೊಲೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 21:26 IST
Last Updated 28 ಜೂನ್ 2020, 21:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಶನಿವಾರ ರಾತ್ರಿ ಪ್ರತ್ಯೇಕ ಪ್ರಕರಣಗಳಲ್ಲಿ ಜಿಮ್ ತರಬೇತುದಾರ ಸೇರಿ ಇಬ್ಬರನ್ನು ಕೊಲೆ ಮಾಡಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಣಿ ಅಲಿಯಾಸ್ ಸುಬ್ರಮಣಿ (30) ಎಂಬುವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿದೆ.

‘ಐಟಿಐ ಲೇಔಟ್ ನಿವಾಸಿಯಾಗಿದ್ದ ಸುಬ್ರಮಣಿ, ಚಂದ್ರಾ ಲೇಔಟ್‌ನಲ್ಲಿ ತಮ್ಮದೇ ಜಿಮ್‌ ತೆರೆದಿದ್ದರು. ಶನಿವಾರ ರಾತ್ರಿ ಮನೆಗೆ ಹೊರಟಿದ್ದ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿಕೊಂದಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ಪಾದಚಾರಿ ಕೊಲೆ: ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಳೇ ಗುಡ್ಡದಹಳ್ಳಿ ನಿವಾಸಿ ರಾಜಕುಮಾರ್ (40) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

‘ರಾಜಸ್ಥಾನದ ರಾಜಕುಮಾರ್, ಹಾರ್ಡ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಹೊರಟಿದ್ದಾಗ ಮಾರ್ಗಮಧ್ಯೆಯೇ ಜಗಳ ತೆಗೆದಿದ್ದ ಅಪರಿಚಿತರು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.