ADVERTISEMENT

ಬಾಂಗ್ಲಾದಿಂದ ಬಂದು ವಾಹನ ಕಳವು: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮೇ 2022, 22:00 IST
Last Updated 12 ಮೇ 2022, 22:00 IST
   

ಬೆಂಗಳೂರು: ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದು ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಬಾಂಗ್ಲಾದೇಶದ ಬಿಮುಲ್ಲಾ ಅಲಿಯಾಸ್ ಅಭಿ ಮುಲ್ಲಾ (32) ಹಾಗೂ ಮಹಮ್ಮದ್ ನಾಸೀರ್ ಶೇಖ್ ಅಲಿಯಾಸ್ ಗುಪ್ರಾನ್ (35) ಬಂಧಿತರು. ಇವರಿಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ತಾಲ್ಲೂಕಿನ ಬರಗರನಹಳ್ಳಿಯಲ್ಲಿ ವಾಸವಿದ್ದುಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕೊಲೆ, ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳು, ಕೆಲ ವರ್ಷ ಬಾಂಗ್ಲಾದೇಶದ ಜೈಲಿನಲ್ಲಿದ್ದರು. ಜಾಮೀನು ಮೇಲೆ ಹೊರಬಂದಿದ್ದ ಅವರು, ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದರು. ಬೆಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದ್ವಿಚಕ್ರ ವಾಹನಗಳನ್ನು ಕದ್ದು ಮಾರಿ, ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಇವರಿಂದ 8 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.