ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ತಾಲೀಮು ವೇಳೆ ಎರಡು ಯುದ್ಧ ವಿಮಾನಗಳು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮಂಗಳವಾರ ಮಧ್ಯಾಹ್ನ ಸೂರ್ಯ ಕಿರಣ್ ಯುದ್ಧ ವಿಮಾನಗಳುಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಪೈಲಟ್ಗಳ ಪೈಕಿ ಒಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಬ್ಬರು ಪೈಲಟ್ಗಳು ಅಪಾಯದಿಂದಾಗಿ ಪಾರಾಗಿದ್ದು, ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯಲ್ಲಿ ನಾಗರಿಕರೊಬ್ಬರಿಗೆ ಗಾಯವಾಗಿದ್ದು, ವಿಮಾನದ ಅವಶೇಷಗಳು ಯಲಹಂಕ ನ್ಯೂಟೌನ್ನಇಸ್ರೊ ಲೇಔಟ್ನಲ್ಲಿ ಬಿದ್ದಿವೆ. ಸ್ಥಳೀಯ ನಾಗರಿಕರು ಪೈಲಟ್ ಒಬ್ಬರನ್ನುಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿರುವುದನ್ನು ವಿಡಿಯೊದಲ್ಲಿ ಕಾಣಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.