ಬೆಂಗಳೂರು: ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರುಆರೋಪಿಗಳುನೇಪಾಳದಲ್ಲಿಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ.
‘ಉದ್ಯಮಿ ವಾಂಕಿ ಪೆಂಚಾಲಯ್ಯ ಎಂಬುವರ ಮನೆಯಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಲಾಲ್ ಚಂದ್ರಸಿಂಗ್ ಶಾಹಿ ಠಾಕೂರ್ ಹಾಗೂ ಕೋಮಲಾ ಎಂಬುವರೇ ಕೃತ್ಯ ಎಸಗಿದ್ದ ಅನುಮಾನವಿತ್ತು. ಇದೀಗ ಅವರಿಬ್ಬರನ್ನು ನೇಪಾಳ ಪೊಲೀಸರುಬಂಧಿಸಿದ್ದಾರೆ. ಇಬ್ಬರನ್ನೂ ನಗರಕ್ಕೆ ಕರೆತರಲು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.